ಉಡುಪಿ: ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.
ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51) ಎಂಬವರು ಅಪಘಾತದಲ್ಲಿ ಮೃತಪಟ್ಟಿದ್ದು, ಪುತ್ರನ ಸಾವಿನ ಸುದ್ದಿ ತಿಳಿದು ತಾಯಿ ಇಂದಿರಾ ಮೂಲ್ಯ (74) ಅವರು ಕೊನೆಯುಸಿರೆಳೆದಿದ್ದಾರೆ. ರಮೇಶ್ ಅವರು ಮಾರ್ಚ್ 23ರಂದು ಬಂಟಕಲ್ಲಿನಿಂದ ಬಿ.ಸಿ. ರೋಡ್ ಪಾಂಬೂರು ಮಾರ್ಗವಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಮೇಶ್ ಮೂಲ್ಯ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 24ರಂದು ರಾತ್ರಿ ಮೃತಪಟ್ಟಿದ್ದರು.
ಅಪಘಾತದಿಂದ ಮೃತಪಟ್ಟ ರಮೇಶ್ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃತಪಟ್ಟಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…