ಮುಲ್ಕಿ: ಜ್ಞಾನದ ಜ್ವಾಲೆಯು ಅಜ್ಞಾನದ ಕತ್ತಲೆಯನ್ನ ದೂರ ಮಾಡಿ ವಿದ್ಯೆಯ ಮೂಲಕ ಸುಜ್ಞಾನವನ್ನು ಮೂಡಿಸುತ್ತದೆ. ದೀಪದಿಂದ ಹೊರಹೊಮ್ಮುವ ಬೆಳಕಿನ ಕಿರಣಗಳು ಹಲವಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಲು ದಾರಿಯನ್ನು ಸೂಚಿಸುವ ಸಂಕೇತವಾಗಿದೆ, ಆದ್ದರಿಂದ ನಮ್ಮ ಶಾಲೆಯ ಧ್ಯೇಯವಾಕ್ಯ, – “ತಮಸೋಮಾ ಜ್ಯೋತಿರ್ಗಮಯ” ಎಂದು ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಆಡಳಿತ ಮಂಡಳಿ ನಡೆಸಿದ್ದು ಅದರ ಭಾಗವಾಗಿ, ವಿನೂತನ ಶಾಲಾ ಲಾಂಛನವನ್ನು ಬಿಡುಗಡೆ ಮಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸೊಸೈಟಿಯ ಕಾರ್ಯದರ್ಶಿ ಪುರಂದರ ಶೆಟ್ಟಿಗಾರ್, ಕೋಶಾಧಿಕಾರಿ ಭುವನಾಭಿರಾಮ ಉಡುಪ, ನಿರ್ದೇಶಕರುಗಳಾದ ಪಟೇಲ್ ವಾಸುದೇವ ರಾವ್, ಪಿ.ಎಸ್. ಸುರೇಶ್ ರಾವ್, ಪಟೇಲ್ ವಿಶ್ವನಾಥ್ ರಾವ್ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಶಾಲಾ ಪ್ರಾಂಶುಪಾಲ ಜಿತೇಂದ್ರ ವಿ ರಾವ್ ವಂದಿಸಿದರು, ಸಹ ಶಿಕ್ಷಕಿ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…