ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಸುರಕ್ಷಿತ ಆಹಾರ ಮಾರಾಟ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಸಂಗ್ರಹಿಸಿದ ಮಾದರಿಯ ಪರೀಕ್ಷಾ ವರದಿ. ಸ್ಯಾಂಪಲ್ ಪರಿಶೀಲನೆ ವೇಳೆ ನಗರದಲ್ಲಿ ಮಾರಾಟವಾಗುವ ವಿವಿಧ ಆಹಾರದಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.
ರಾಜಧಾನಿಯಲ್ಲಿ ದಾಳಿ ಮುಂದುವರಿಸಿದ ಅಧಿಕಾರಿಗಳಿಗೆ ಸಿಹಿ ತಿಂಡಿಗಳಲ್ಲೂ ಕ್ಯಾನ್ಸರ್ ಅಂಶ ಇರುವುದು ತಿಳಿದು ಬಂದಿದೆ. ಜನರನ್ನು ಆಕರ್ಷಿಸಲು ಬೇಕರಿ ಹಾಗೂ ಹೋಟೆಲ್ಗಳಲ್ಲಿ ರಾಸಾಯನಿಕ ಬಣ್ಣವನ್ನು ಬಳಸಿ ಸಿಹಿ ತಿಂಡಿಗಳನ್ನು ತಯಾರಿಸಲಾಗುತ್ತದೆ. ಈ ಬಣ್ಣ ಆರೋಗ್ಯಕ್ಕೆ ಹಾನಿಕಾರಕ ಎಂದು ಪರಿಶೀಲನೆಯಿಂದ ತಿಳಿದು ಬಂದಿದೆ. ವಿಶೇಷವಾಗಿ ಬೇಕರಿಗಳಲ್ಲಿ ಸಿಗುವ ಬಗೆ ಬಗೆಯ ಬಣ್ಣದ ಸಿಹಿ ತಿಂಡಿಗಳಲ್ಲಿ ಬಳಸುವ ರಾಸಾಯನಿಕ ಬಣ್ಣದಲ್ಲಿ ಕ್ಯಾನರ್ ಅಂಶ ಇರುವುದು ಗೊತ್ತಾಗಿದೆ. ಅಷ್ಟೇ ಅಲ್ಲದೆ ಇದರಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದು ಇದರಿಂದ ಡಯಾಬಿಟಿಸ್ ಬರುವ ಸಾಧ್ಯತೆ ಇದೆ. ಹೀಗಾಗಿ ತಿನ್ನಲು ಯೋಗ್ಯವಲ್ಲದ ಸಿಹಿ ತಿಂಡಿಗಳ ಮಾರಾಟ ಮಳಿಗೆಗಳಿಗೆ ಆಹಾರ ಇಲಾಖೆ ನೋಟೀಸ್ ನೀಡಿದೆ. ಅಲ್ಲದೆ ಸ್ವಚ್ಚತೆ ಇಲ್ಲದ, ಕಲಬೆರೆಕೆ ಮಾಡುವ, ಪರವಾನಿಗೆ ಪಡೆಯದ ಬೇಕರಿ ಹಾಗೂ ಅಂಗಡಿಗಳಿಗೆ ಆಹಾರ ಇಲಾಖೆ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ಸಿಹಿ ತಿಂಡಿಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ಮೈಸೂರು ಪಾಕ್, ಮಿಕ್ಸ್ಚರ್, ಜಿಲೇಬಿ, ಜಹಂಗೀರ್ನಲ್ಲಿ ಕೃತಕ ಬಣ್ಣ ಬಳಕೆ ಮಾಡಿರುವುದು ಗೊತ್ತಾಗಿದೆ. ಅಲ್ಲದೆ ಈ ಸಿಹಿ ತಿಂಡಿಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿರುವುದು ಪರಿಶೀಲನೆಯಿಂದ ತಿಳಿದು ಬಂದಿದೆ. ಇದರ ಬೆನ್ನೆಲ್ಲೆ ಹಲವೆಡೆ ದಾಳಿ ನಡೆಸಿ ಮಾದರಿ ಸಂಗ್ರಹಿಸಿ ಪರಿಶೀಲನೆಗೆ ಕಳುಹಿಸಲಾಗಿದೆ. ಈ ಪರೀಕ್ಷಾ ವರದಿಯಲ್ಲಿ ಕೆಲ ಸಿಹಿ ತಿಂಡಿಗಳು ತಿನ್ನಲು ಯೋಗ್ಯವಾಗಿಲ್ಲ. ಈ ಸ್ವೀಟ್ಗಳಲ್ಲಿ ಕಲಬೆರೆಕೆ, ಕಲರಿಂಗ್ ಬಳಕೆ ಮಾಡಲಾಗಿದೆ. ಇದರ ಸೇವನೆಯಿಂದ ಕ್ಯಾನ್ಸರ್, ಡಯಾಬಿಟಿಸ್ಗೆ ಕಾರಣವಾಗುವ ಅಂಶ ದೇಹ ಸೇರುತ್ತದೆ ಎಂದು ಎಚ್ಚರಿಸಲಾಗಿದೆ.
ಸ್ವೀಟ್ಸ್ಗಳಲ್ಲಿ ಬಳಕೆ ಮಾಡುವ ಕಲರ್ ಕ್ಯಾನ್ಸರ್ ಮಾತ್ರವಲ್ಲದೆ, ಹೆಪಟೈಟಿಸ್, ಡಯಾಬಿಟಿಸ್ ಗೆ ಕಾರಣವಾಗುತ್ತದೆ ಎಂದು ಆಹಾರ ತಜ್ಞರು ಹೇಳಿದ್ದಾರೆ. ಮಿಕ್ಸ್ಚರ್ ಹಾಗೂ ಜಿಲೇಜಿ ತಯಾರಿಕೆಯಲ್ಲಿ ಬಳಕೆ ಮಾಡುವ ಹಳದಿ ಬಣ್ಣ ಕ್ಯಾನ್ಸರ್ ಕಾರಕ ಎಂದು ತಿಳಿದು ಬಂದಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…