ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಪ್ರಕರಣ: ಹಂತಕ ಪತಿ ಬಂಧನ

ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.

ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್​​​ ತುಂಬಿಟ್ಟು ಪರಾರಿಯಾಗಿದ್ದ.

ಹುಳಿಮಾವು ಪೊಲೀಸರು ಸಿಡಿಆರ್​ ಆಧರಿಸಿ ಮಹಾರಾಷ್ಟ್ರದ ಪುಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಶೋಧಕಾರ್ಯ ನಡೆಸಿದಾಗ ರಾಕೇಶ್ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಪುಣೆ ಪೊಲಿಸರ ವಶದಲ್ಲಿರುವ ರಾಕೇಶ್ ನನ್ನು ಬೆಂಗಳೂರಿಗೆ ಕರೆತರಲು ಹುಳಿಮಾವು ಪೊಲೀಸರ ತಂಡ ಪುಣೆಗೆ ತೆರಳುತ್ತಿದ್ದು, ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ನಂತರ ಪತ್ನಿಯ ಹತ್ಯೆ ಮಾಡಿದ ಕಾರಣ ತಿಳಿದುಕೊಳ್ಳಲು ಪೊಲೀಸರು ಆತನನನ್ನು ವಿಚಾರಣೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!