ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.
ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್ ತುಂಬಿಟ್ಟು ಪರಾರಿಯಾಗಿದ್ದ.
ಹುಳಿಮಾವು ಪೊಲೀಸರು ಸಿಡಿಆರ್ ಆಧರಿಸಿ ಮಹಾರಾಷ್ಟ್ರದ ಪುಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಶೋಧಕಾರ್ಯ ನಡೆಸಿದಾಗ ರಾಕೇಶ್ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಪುಣೆ ಪೊಲಿಸರ ವಶದಲ್ಲಿರುವ ರಾಕೇಶ್ ನನ್ನು ಬೆಂಗಳೂರಿಗೆ ಕರೆತರಲು ಹುಳಿಮಾವು ಪೊಲೀಸರ ತಂಡ ಪುಣೆಗೆ ತೆರಳುತ್ತಿದ್ದು, ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ನಂತರ ಪತ್ನಿಯ ಹತ್ಯೆ ಮಾಡಿದ ಕಾರಣ ತಿಳಿದುಕೊಳ್ಳಲು ಪೊಲೀಸರು ಆತನನನ್ನು ವಿಚಾರಣೆ ನಡೆಸಲಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…