ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.
ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್ ತುಂಬಿಟ್ಟು ಪರಾರಿಯಾಗಿದ್ದ.
ಹುಳಿಮಾವು ಪೊಲೀಸರು ಸಿಡಿಆರ್ ಆಧರಿಸಿ ಮಹಾರಾಷ್ಟ್ರದ ಪುಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಶೋಧಕಾರ್ಯ ನಡೆಸಿದಾಗ ರಾಕೇಶ್ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಪುಣೆ ಪೊಲಿಸರ ವಶದಲ್ಲಿರುವ ರಾಕೇಶ್ ನನ್ನು ಬೆಂಗಳೂರಿಗೆ ಕರೆತರಲು ಹುಳಿಮಾವು ಪೊಲೀಸರ ತಂಡ ಪುಣೆಗೆ ತೆರಳುತ್ತಿದ್ದು, ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ನಂತರ ಪತ್ನಿಯ ಹತ್ಯೆ ಮಾಡಿದ ಕಾರಣ ತಿಳಿದುಕೊಳ್ಳಲು ಪೊಲೀಸರು ಆತನನನ್ನು ವಿಚಾರಣೆ ನಡೆಸಲಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…