ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸಲಾದ ವಾರ್ಷಿಕ ವಂದನಾ ಪ್ರಶಸ್ತಿ -2025ನ್ನು ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಮಾ.28 ರಂದು ರಾತ್ರಿ 8 ಗಂಟೆಗೆ ಮಂಗಳೂರಿನ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೊಟೇಲ್ ಉದ್ಯಮದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಗಣನೀಯ ಸಾಧನೆಯ ಫಲವಾಗಿ ಪ್ರಶಸ್ತಿ ದೊರಕಿದೆ.
ರೋಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ಪ್ರತಿಷ್ಠಿತ ವಂದನಾ ಪ್ರಶಸ್ತಿಗೆ ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ರೋಟರಿ ಸಂಸ್ಥೆಯ ವೃತ್ತಿಪರ ಜೀವೆ ಯೋಜನೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಕೆ.ಪ್ರಕಾಶ್ ಶೆಟ್ಟಿ ಈ ವಂದನಾ ಪ್ರಶಸ್ತಿ ಇದುವರೆಗೂ ಸಿಕ್ಕಿದ ಪ್ರಶಸ್ತಿಗಳಲ್ಲಿ ಬಹಳ ಶ್ರೇಷ್ಠವಾದದ್ದು ಎಂದು ಭಾವಿಸುತ್ತೇನೆ. ಅದೃಷ್ಟದ ಜೊತೆ ಪ್ರಯತ್ನಗಳು ಸೇರಿದಾಗ ಮಾತ್ರ ಸಾಧನೆಯಗಿ ಪರಿವರ್ತನೆಯಗಲು ಸಾಧ್ಯ ಎಂದರು .
ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಬ್ರಿಯಾನ್ ಪಿಂಟೊ, ರೋಟರ್ಯಾಕ್ಟ್ ಮಂಗಳೂರು ಸಿಟಿಯ ಅಧ್ಯಕ್ಷ ಬಿದ್ದಪ್ಪ ಬಿ.ಎ , ರೋಟರಿ ಜಿಲ್ಲಾ 3181ರಸಹಾಯಕ ಗವರ್ನರ್ ಕೃಷ್ಣ ಹೆಗ್ಡೆ, ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ಸಂಜಯ್ ಆರ್. ಮೊದಲಾದವರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…