ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸಲಾದ ವಾರ್ಷಿಕ ವಂದನಾ ಪ್ರಶಸ್ತಿ -2025ನ್ನು ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಮಾ.28 ರಂದು ರಾತ್ರಿ 8 ಗಂಟೆಗೆ ಮಂಗಳೂರಿನ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೊಟೇಲ್ ಉದ್ಯಮದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಗಣನೀಯ ಸಾಧನೆಯ ಫಲವಾಗಿ ಪ್ರಶಸ್ತಿ ದೊರಕಿದೆ.
ರೋಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ಪ್ರತಿಷ್ಠಿತ ವಂದನಾ ಪ್ರಶಸ್ತಿಗೆ ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ರೋಟರಿ ಸಂಸ್ಥೆಯ ವೃತ್ತಿಪರ ಜೀವೆ ಯೋಜನೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಕೆ.ಪ್ರಕಾಶ್ ಶೆಟ್ಟಿ ಈ ವಂದನಾ ಪ್ರಶಸ್ತಿ ಇದುವರೆಗೂ ಸಿಕ್ಕಿದ ಪ್ರಶಸ್ತಿಗಳಲ್ಲಿ ಬಹಳ ಶ್ರೇಷ್ಠವಾದದ್ದು ಎಂದು ಭಾವಿಸುತ್ತೇನೆ. ಅದೃಷ್ಟದ ಜೊತೆ ಪ್ರಯತ್ನಗಳು ಸೇರಿದಾಗ ಮಾತ್ರ ಸಾಧನೆಯಗಿ ಪರಿವರ್ತನೆಯಗಲು ಸಾಧ್ಯ ಎಂದರು .
ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಬ್ರಿಯಾನ್ ಪಿಂಟೊ, ರೋಟರ್ಯಾಕ್ಟ್ ಮಂಗಳೂರು ಸಿಟಿಯ ಅಧ್ಯಕ್ಷ ಬಿದ್ದಪ್ಪ ಬಿ.ಎ , ರೋಟರಿ ಜಿಲ್ಲಾ 3181ರಸಹಾಯಕ ಗವರ್ನರ್ ಕೃಷ್ಣ ಹೆಗ್ಡೆ, ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ಸಂಜಯ್ ಆರ್. ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…