ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸಲಾದ ವಾರ್ಷಿಕ ವಂದನಾ ಪ್ರಶಸ್ತಿ -2025ನ್ನು ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಮಾ.28 ರಂದು ರಾತ್ರಿ 8 ಗಂಟೆಗೆ ಮಂಗಳೂರಿನ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೊಟೇಲ್ ಉದ್ಯಮದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಗಣನೀಯ ಸಾಧನೆಯ ಫಲವಾಗಿ ಪ್ರಶಸ್ತಿ ದೊರಕಿದೆ.
ರೋಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ಪ್ರತಿಷ್ಠಿತ ವಂದನಾ ಪ್ರಶಸ್ತಿಗೆ ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ರೋಟರಿ ಸಂಸ್ಥೆಯ ವೃತ್ತಿಪರ ಜೀವೆ ಯೋಜನೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಕೆ.ಪ್ರಕಾಶ್ ಶೆಟ್ಟಿ ಈ ವಂದನಾ ಪ್ರಶಸ್ತಿ ಇದುವರೆಗೂ ಸಿಕ್ಕಿದ ಪ್ರಶಸ್ತಿಗಳಲ್ಲಿ ಬಹಳ ಶ್ರೇಷ್ಠವಾದದ್ದು ಎಂದು ಭಾವಿಸುತ್ತೇನೆ. ಅದೃಷ್ಟದ ಜೊತೆ ಪ್ರಯತ್ನಗಳು ಸೇರಿದಾಗ ಮಾತ್ರ ಸಾಧನೆಯಗಿ ಪರಿವರ್ತನೆಯಗಲು ಸಾಧ್ಯ ಎಂದರು .
ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಬ್ರಿಯಾನ್ ಪಿಂಟೊ, ರೋಟರ್ಯಾಕ್ಟ್ ಮಂಗಳೂರು ಸಿಟಿಯ ಅಧ್ಯಕ್ಷ ಬಿದ್ದಪ್ಪ ಬಿ.ಎ , ರೋಟರಿ ಜಿಲ್ಲಾ 3181ರಸಹಾಯಕ ಗವರ್ನರ್ ಕೃಷ್ಣ ಹೆಗ್ಡೆ, ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ಸಂಜಯ್ ಆರ್. ಮೊದಲಾದವರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…