ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸಲಾದ ವಾರ್ಷಿಕ ವಂದನಾ ಪ್ರಶಸ್ತಿ -2025ನ್ನು ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಮಾ.28 ರಂದು ರಾತ್ರಿ 8 ಗಂಟೆಗೆ ಮಂಗಳೂರಿನ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೊಟೇಲ್ ಉದ್ಯಮದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಗಣನೀಯ ಸಾಧನೆಯ ಫಲವಾಗಿ ಪ್ರಶಸ್ತಿ ದೊರಕಿದೆ.
ರೋಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ಪ್ರತಿಷ್ಠಿತ ವಂದನಾ ಪ್ರಶಸ್ತಿಗೆ ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ರೋಟರಿ ಸಂಸ್ಥೆಯ ವೃತ್ತಿಪರ ಜೀವೆ ಯೋಜನೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಕೆ.ಪ್ರಕಾಶ್ ಶೆಟ್ಟಿ ಈ ವಂದನಾ ಪ್ರಶಸ್ತಿ ಇದುವರೆಗೂ ಸಿಕ್ಕಿದ ಪ್ರಶಸ್ತಿಗಳಲ್ಲಿ ಬಹಳ ಶ್ರೇಷ್ಠವಾದದ್ದು ಎಂದು ಭಾವಿಸುತ್ತೇನೆ. ಅದೃಷ್ಟದ ಜೊತೆ ಪ್ರಯತ್ನಗಳು ಸೇರಿದಾಗ ಮಾತ್ರ ಸಾಧನೆಯಗಿ ಪರಿವರ್ತನೆಯಗಲು ಸಾಧ್ಯ ಎಂದರು .
ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಬ್ರಿಯಾನ್ ಪಿಂಟೊ, ರೋಟರ್ಯಾಕ್ಟ್ ಮಂಗಳೂರು ಸಿಟಿಯ ಅಧ್ಯಕ್ಷ ಬಿದ್ದಪ್ಪ ಬಿ.ಎ , ರೋಟರಿ ಜಿಲ್ಲಾ 3181ರಸಹಾಯಕ ಗವರ್ನರ್ ಕೃಷ್ಣ ಹೆಗ್ಡೆ, ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ಸಂಜಯ್ ಆರ್. ಮೊದಲಾದವರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…