ಮಂಗಳೂರು;ಇಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ತುಳುನಾಡಿನ ತ್ರಿವಳಿ ಕಣ್ಮಣಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಡಲಾಯಿತು.
ಉದ್ಯಮಿ ಸಮಾಜ ಸೇವಕ, ದಾನಿ, ಕನ್ಯಾನ ಸದಾಶಿವ ಶೆಟ್ಟಿ, ಸಹಕಾರ ರಂಗದ ಧೀಮಂತ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ ಮೂಲಸೌಕರ್ಯವನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತಿರುವ ಉದ್ಯಮಿ ರೋಹನ್ ಮೊಂತೆರೋ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಲಾಯಿತು. ರಾಜ್ಯಪಾಲರಿಂದ ರಚಿಸಲಾದ ತಜ್ಞರ ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ ಈ ಮೂವರನ್ನು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ರು. ಸಮಾರಂಭದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್, ಕುಲಪತಿ ಪ್ರೊ. ಪಿ.ಎಲ್. ಧರ್ಮ, ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಮತ್ತು ಮುಂಬಯಿಯ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವಿ.ಎನ್.ರಾಜಶೇಖರನ್ ಪಿಳ್ಳೆöÊ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…