ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ನಗರದಾದ್ಯಂತ ರಂಜಾನ್ ಹಬ್ಬದ ಖರೀದಿ ಜೋರು

ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ರಂಜಾನ್ ಹಬ್ಬ ಆಚರಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ.

ರಂಜಾನ್ ಹಬ್ಬ ಆಚರಣೆಗೆ ಇನ್ನು ಎರಡ್ಮೂರು ದಿನ ಬಾಕಿ ಇದೆ. ಕರಾವಳಿ ನಗರದಲ್ಲಿ ಹಬ್ಬದ ಸಿದ್ಧತೆ ಭರದಿಂದ ಸಾಗಿದೆ. ಖರೀದಿ ಭರಾಟೆಯೂ ಜೋರಾಗಿದೆ. ಅಲ್ಲದೆ, ಅಂಗಡಿಗಳಲ್ಲಿ ರಂಜಾನ್ ಹಬ್ಬದ ರಿಯಾಯ್ತಿ ದರವೂ ನೀಡಲಾಗುತ್ತಿದೆ.

ಮಂಗಳೂರು ಪೇಟೆಯೆಲ್ಲೆಡೆ ರಂಜಾನ್ ಶಾಪಿಂಗ್‌ಗಾಗಿ ಕೆಲ ಅಂಗಡಿಗಳು ತಲೆ ಎತ್ತಿವೆ. ಮಹಿಳೆಯರು ಬಟ್ಟೆ, ಸೌಂದರ್ಯ ವರ್ಧಕ, ಮೆಹೆಂದಿ, ಬಳೆ, ವಿಧ ವಿಧವಾದ ಕಿವಿಯೋಲೆ, ಮುತ್ತುಗಳಿಂದ ಮಾಡಿರುವ ಬಳೆ ಇನ್ನಿತರ ವಸ್ತುಗಳನ್ನು ಖರೀದಿಸಿ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.
ಕೆಲ ಅಂಗಡಿಗಳಲ್ಲಿ ಹಬ್ಬದ ಖರೀದಿಗಾಗಿ ಮುಸ್ಲಿಮರು ಕುಟುಂಬ ಸಮೇತ ಬಂದು ಸಂಭ್ರಮಿಸುತ್ತಿದ್ದಾರೆ. ಪುರುಷರು ಹಬ್ಬಕ್ಕಾಗಿ ಹೊಸಬಟ್ಟೆ, ಟೋಪಿ, ಕರವಸ್ತ್ರ, ಸುಗಂಧ ದ್ರವ್ಯ, ಖರೀದಿಯಲ್ಲಿ ಬ್ಯುಸಿ ಆಗಿದ್ದಾರೆ.

ಬಟ್ಟೆ ಅಂಗಡಿಗಳಲ್ಲಿ ಚಿಣ್ಣರು, ಮಹಿಳೆಯರು ಬಟ್ಟೆ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.
ಹಬ್ಬಕ್ಕಾಗಿ ವಿಶೇಷ ಬಣ್ಣದ ಬಟ್ಟೆಗಳು ಮಾರುಕಟ್ಟೆಗೆ ಬಂದಿದ್ದು, ಮಕ್ಕಳಿಗೆ ವಿಶೇಷ ವಿನ್ಯಾಸದ ಫ್ರಾಕ್ ಮತ್ತು ಬಟ್ಟೆಗಳ ಮೇಳದ ಸ್ಟಾಲ್ ಅಲ್ಲಲ್ಲಿ ಕಂಗೊಳಿಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!