ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ರಂಜಾನ್ ಹಬ್ಬ ಆಚರಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ.
ರಂಜಾನ್ ಹಬ್ಬ ಆಚರಣೆಗೆ ಇನ್ನು ಎರಡ್ಮೂರು ದಿನ ಬಾಕಿ ಇದೆ. ಕರಾವಳಿ ನಗರದಲ್ಲಿ ಹಬ್ಬದ ಸಿದ್ಧತೆ ಭರದಿಂದ ಸಾಗಿದೆ. ಖರೀದಿ ಭರಾಟೆಯೂ ಜೋರಾಗಿದೆ. ಅಲ್ಲದೆ, ಅಂಗಡಿಗಳಲ್ಲಿ ರಂಜಾನ್ ಹಬ್ಬದ ರಿಯಾಯ್ತಿ ದರವೂ ನೀಡಲಾಗುತ್ತಿದೆ.
ಮಂಗಳೂರು ಪೇಟೆಯೆಲ್ಲೆಡೆ ರಂಜಾನ್ ಶಾಪಿಂಗ್ಗಾಗಿ ಕೆಲ ಅಂಗಡಿಗಳು ತಲೆ ಎತ್ತಿವೆ. ಮಹಿಳೆಯರು ಬಟ್ಟೆ, ಸೌಂದರ್ಯ ವರ್ಧಕ, ಮೆಹೆಂದಿ, ಬಳೆ, ವಿಧ ವಿಧವಾದ ಕಿವಿಯೋಲೆ, ಮುತ್ತುಗಳಿಂದ ಮಾಡಿರುವ ಬಳೆ ಇನ್ನಿತರ ವಸ್ತುಗಳನ್ನು ಖರೀದಿಸಿ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.
ಕೆಲ ಅಂಗಡಿಗಳಲ್ಲಿ ಹಬ್ಬದ ಖರೀದಿಗಾಗಿ ಮುಸ್ಲಿಮರು ಕುಟುಂಬ ಸಮೇತ ಬಂದು ಸಂಭ್ರಮಿಸುತ್ತಿದ್ದಾರೆ. ಪುರುಷರು ಹಬ್ಬಕ್ಕಾಗಿ ಹೊಸಬಟ್ಟೆ, ಟೋಪಿ, ಕರವಸ್ತ್ರ, ಸುಗಂಧ ದ್ರವ್ಯ, ಖರೀದಿಯಲ್ಲಿ ಬ್ಯುಸಿ ಆಗಿದ್ದಾರೆ.
ಬಟ್ಟೆ ಅಂಗಡಿಗಳಲ್ಲಿ ಚಿಣ್ಣರು, ಮಹಿಳೆಯರು ಬಟ್ಟೆ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.
ಹಬ್ಬಕ್ಕಾಗಿ ವಿಶೇಷ ಬಣ್ಣದ ಬಟ್ಟೆಗಳು ಮಾರುಕಟ್ಟೆಗೆ ಬಂದಿದ್ದು, ಮಕ್ಕಳಿಗೆ ವಿಶೇಷ ವಿನ್ಯಾಸದ ಫ್ರಾಕ್ ಮತ್ತು ಬಟ್ಟೆಗಳ ಮೇಳದ ಸ್ಟಾಲ್ ಅಲ್ಲಲ್ಲಿ ಕಂಗೊಳಿಸುತ್ತಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…