ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ರಂಜಾನ್ ಹಬ್ಬ ಆಚರಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ.
ರಂಜಾನ್ ಹಬ್ಬ ಆಚರಣೆಗೆ ಇನ್ನು ಎರಡ್ಮೂರು ದಿನ ಬಾಕಿ ಇದೆ. ಕರಾವಳಿ ನಗರದಲ್ಲಿ ಹಬ್ಬದ ಸಿದ್ಧತೆ ಭರದಿಂದ ಸಾಗಿದೆ. ಖರೀದಿ ಭರಾಟೆಯೂ ಜೋರಾಗಿದೆ. ಅಲ್ಲದೆ, ಅಂಗಡಿಗಳಲ್ಲಿ ರಂಜಾನ್ ಹಬ್ಬದ ರಿಯಾಯ್ತಿ ದರವೂ ನೀಡಲಾಗುತ್ತಿದೆ.
ಮಂಗಳೂರು ಪೇಟೆಯೆಲ್ಲೆಡೆ ರಂಜಾನ್ ಶಾಪಿಂಗ್ಗಾಗಿ ಕೆಲ ಅಂಗಡಿಗಳು ತಲೆ ಎತ್ತಿವೆ. ಮಹಿಳೆಯರು ಬಟ್ಟೆ, ಸೌಂದರ್ಯ ವರ್ಧಕ, ಮೆಹೆಂದಿ, ಬಳೆ, ವಿಧ ವಿಧವಾದ ಕಿವಿಯೋಲೆ, ಮುತ್ತುಗಳಿಂದ ಮಾಡಿರುವ ಬಳೆ ಇನ್ನಿತರ ವಸ್ತುಗಳನ್ನು ಖರೀದಿಸಿ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.
ಕೆಲ ಅಂಗಡಿಗಳಲ್ಲಿ ಹಬ್ಬದ ಖರೀದಿಗಾಗಿ ಮುಸ್ಲಿಮರು ಕುಟುಂಬ ಸಮೇತ ಬಂದು ಸಂಭ್ರಮಿಸುತ್ತಿದ್ದಾರೆ. ಪುರುಷರು ಹಬ್ಬಕ್ಕಾಗಿ ಹೊಸಬಟ್ಟೆ, ಟೋಪಿ, ಕರವಸ್ತ್ರ, ಸುಗಂಧ ದ್ರವ್ಯ, ಖರೀದಿಯಲ್ಲಿ ಬ್ಯುಸಿ ಆಗಿದ್ದಾರೆ.
ಬಟ್ಟೆ ಅಂಗಡಿಗಳಲ್ಲಿ ಚಿಣ್ಣರು, ಮಹಿಳೆಯರು ಬಟ್ಟೆ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.
ಹಬ್ಬಕ್ಕಾಗಿ ವಿಶೇಷ ಬಣ್ಣದ ಬಟ್ಟೆಗಳು ಮಾರುಕಟ್ಟೆಗೆ ಬಂದಿದ್ದು, ಮಕ್ಕಳಿಗೆ ವಿಶೇಷ ವಿನ್ಯಾಸದ ಫ್ರಾಕ್ ಮತ್ತು ಬಟ್ಟೆಗಳ ಮೇಳದ ಸ್ಟಾಲ್ ಅಲ್ಲಲ್ಲಿ ಕಂಗೊಳಿಸುತ್ತಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…