ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ರಂಜಾನ್ ಹಬ್ಬ ಆಚರಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ.
ರಂಜಾನ್ ಹಬ್ಬ ಆಚರಣೆಗೆ ಇನ್ನು ಎರಡ್ಮೂರು ದಿನ ಬಾಕಿ ಇದೆ. ಕರಾವಳಿ ನಗರದಲ್ಲಿ ಹಬ್ಬದ ಸಿದ್ಧತೆ ಭರದಿಂದ ಸಾಗಿದೆ. ಖರೀದಿ ಭರಾಟೆಯೂ ಜೋರಾಗಿದೆ. ಅಲ್ಲದೆ, ಅಂಗಡಿಗಳಲ್ಲಿ ರಂಜಾನ್ ಹಬ್ಬದ ರಿಯಾಯ್ತಿ ದರವೂ ನೀಡಲಾಗುತ್ತಿದೆ.
ಮಂಗಳೂರು ಪೇಟೆಯೆಲ್ಲೆಡೆ ರಂಜಾನ್ ಶಾಪಿಂಗ್ಗಾಗಿ ಕೆಲ ಅಂಗಡಿಗಳು ತಲೆ ಎತ್ತಿವೆ. ಮಹಿಳೆಯರು ಬಟ್ಟೆ, ಸೌಂದರ್ಯ ವರ್ಧಕ, ಮೆಹೆಂದಿ, ಬಳೆ, ವಿಧ ವಿಧವಾದ ಕಿವಿಯೋಲೆ, ಮುತ್ತುಗಳಿಂದ ಮಾಡಿರುವ ಬಳೆ ಇನ್ನಿತರ ವಸ್ತುಗಳನ್ನು ಖರೀದಿಸಿ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.
ಕೆಲ ಅಂಗಡಿಗಳಲ್ಲಿ ಹಬ್ಬದ ಖರೀದಿಗಾಗಿ ಮುಸ್ಲಿಮರು ಕುಟುಂಬ ಸಮೇತ ಬಂದು ಸಂಭ್ರಮಿಸುತ್ತಿದ್ದಾರೆ. ಪುರುಷರು ಹಬ್ಬಕ್ಕಾಗಿ ಹೊಸಬಟ್ಟೆ, ಟೋಪಿ, ಕರವಸ್ತ್ರ, ಸುಗಂಧ ದ್ರವ್ಯ, ಖರೀದಿಯಲ್ಲಿ ಬ್ಯುಸಿ ಆಗಿದ್ದಾರೆ.
ಬಟ್ಟೆ ಅಂಗಡಿಗಳಲ್ಲಿ ಚಿಣ್ಣರು, ಮಹಿಳೆಯರು ಬಟ್ಟೆ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.
ಹಬ್ಬಕ್ಕಾಗಿ ವಿಶೇಷ ಬಣ್ಣದ ಬಟ್ಟೆಗಳು ಮಾರುಕಟ್ಟೆಗೆ ಬಂದಿದ್ದು, ಮಕ್ಕಳಿಗೆ ವಿಶೇಷ ವಿನ್ಯಾಸದ ಫ್ರಾಕ್ ಮತ್ತು ಬಟ್ಟೆಗಳ ಮೇಳದ ಸ್ಟಾಲ್ ಅಲ್ಲಲ್ಲಿ ಕಂಗೊಳಿಸುತ್ತಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…