ಕರಾವಳಿಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಡೆ ರಂಜಾನ್ ಹಬ್ಬ ಆಚರಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ.
ರಂಜಾನ್ ಹಬ್ಬ ಆಚರಣೆಗೆ ಇನ್ನು ಎರಡ್ಮೂರು ದಿನ ಬಾಕಿ ಇದೆ. ಕರಾವಳಿ ನಗರದಲ್ಲಿ ಹಬ್ಬದ ಸಿದ್ಧತೆ ಭರದಿಂದ ಸಾಗಿದೆ. ಖರೀದಿ ಭರಾಟೆಯೂ ಜೋರಾಗಿದೆ. ಅಲ್ಲದೆ, ಅಂಗಡಿಗಳಲ್ಲಿ ರಂಜಾನ್ ಹಬ್ಬದ ರಿಯಾಯ್ತಿ ದರವೂ ನೀಡಲಾಗುತ್ತಿದೆ.
ಮಂಗಳೂರು ಪೇಟೆಯೆಲ್ಲೆಡೆ ರಂಜಾನ್ ಶಾಪಿಂಗ್ಗಾಗಿ ಕೆಲ ಅಂಗಡಿಗಳು ತಲೆ ಎತ್ತಿವೆ. ಮಹಿಳೆಯರು ಬಟ್ಟೆ, ಸೌಂದರ್ಯ ವರ್ಧಕ, ಮೆಹೆಂದಿ, ಬಳೆ, ವಿಧ ವಿಧವಾದ ಕಿವಿಯೋಲೆ, ಮುತ್ತುಗಳಿಂದ ಮಾಡಿರುವ ಬಳೆ ಇನ್ನಿತರ ವಸ್ತುಗಳನ್ನು ಖರೀದಿಸಿ ಹಬ್ಬಕ್ಕೆ ತಯಾರಾಗುತ್ತಿದ್ದಾರೆ.
ಕೆಲ ಅಂಗಡಿಗಳಲ್ಲಿ ಹಬ್ಬದ ಖರೀದಿಗಾಗಿ ಮುಸ್ಲಿಮರು ಕುಟುಂಬ ಸಮೇತ ಬಂದು ಸಂಭ್ರಮಿಸುತ್ತಿದ್ದಾರೆ. ಪುರುಷರು ಹಬ್ಬಕ್ಕಾಗಿ ಹೊಸಬಟ್ಟೆ, ಟೋಪಿ, ಕರವಸ್ತ್ರ, ಸುಗಂಧ ದ್ರವ್ಯ, ಖರೀದಿಯಲ್ಲಿ ಬ್ಯುಸಿ ಆಗಿದ್ದಾರೆ.
ಬಟ್ಟೆ ಅಂಗಡಿಗಳಲ್ಲಿ ಚಿಣ್ಣರು, ಮಹಿಳೆಯರು ಬಟ್ಟೆ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.
ಹಬ್ಬಕ್ಕಾಗಿ ವಿಶೇಷ ಬಣ್ಣದ ಬಟ್ಟೆಗಳು ಮಾರುಕಟ್ಟೆಗೆ ಬಂದಿದ್ದು, ಮಕ್ಕಳಿಗೆ ವಿಶೇಷ ವಿನ್ಯಾಸದ ಫ್ರಾಕ್ ಮತ್ತು ಬಟ್ಟೆಗಳ ಮೇಳದ ಸ್ಟಾಲ್ ಅಲ್ಲಲ್ಲಿ ಕಂಗೊಳಿಸುತ್ತಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…