ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಸ್ತೆ ಅಪಘಾತದಲ್ಲಿ ತಂದೆಯ ಕಣ್ಮುಂದೆ ಮಗನ ದುರ್ಮರಣ

ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್‌ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್‌ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್‌ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.

ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್‌ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್‌ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್‌ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!