ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಸ್ತೆ ಅಪಘಾತದಲ್ಲಿ ತಂದೆಯ ಕಣ್ಮುಂದೆ ಮಗನ ದುರ್ಮರಣ

ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್‌ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್‌ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್‌ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.

ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್‌ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್‌ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್‌ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!