ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.
ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…