ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.
ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…