ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.
ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…