ಬೆಂಗಳೂರು ನಗರದ ಥಣಿಸಂದ್ರ ರೈಲ್ವೆ ಟ್ರ್ಯಾಕ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದೆ. ಹಿಂದೆಯಿಂದ ಬರುತ್ತಿದ್ದ BBMP ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಬಿಬಿಎಂಪಿ ಕಸದ ಲಾರಿಗೆ ಈ ಪ್ರದೇಶದಲ್ಲಿ ನಡೆದಿರುವ 4ನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬ್ದುಲ್ ಖಾದರ್ ಎಂಬುವವರು ಇಂದು ಬೆಳಗ್ಗೆ ಮಗನ ಶಾಲೆಯ ಅಡ್ಮಿಷನ್ಗೆ ವಿಚಾರಿಸಲು ಮನೆಯಿಂದ ಹೊರಟಿದ್ದರು. ತಂದೆಯ ಜೊತೆ ಬೈಕ್ ಮೇಲೆ ಮಗ ಐಮಾನ್ ಕೂತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಿಂದೆಯಿಂದ ಬರ್ತಿದ್ದ ಕಸದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ ಒಂದು ಕಡೆ ಮಗ ಒಂದು ಕಡೆ ಬಿದ್ದಿದ್ದಾರೆ.
ಲಾರಿ ಗುದ್ದಿದ ರಭಸಕ್ಕೆ ಅಬ್ದುಲ್ ಖಾದರ್ ಫುಟ್ಪಾತ್ ಮೇಲೆ ಬಿದ್ದರೆ ಮಗ ಐಮಾನ್ ರಸ್ತೆಗೆ ಬಿದ್ದಿದ್ದಾನೆ. ಆಗ ನಿಯಂತ್ರಣ ತಪ್ಪಿ ಮಗುವಿನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದಿದೆ. ಲಾರಿ ಕೆಳಗೆ ಸಿಕ್ಕ ಐಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಐಮಾನ್ ತಂದೆ ಅಬ್ದುಲ್ ಖಾದರ್ಗೆ ಗಂಭೀರ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನನ್ನು ಶಾಲೆಗೆ ಸೇರಿಸಲು ಹೊರಟಿದ್ದ ತಂದೆ ಆಸ್ಪತ್ರೆ ಸೇರಿದ್ರೆ ಚೆನ್ನಾಗಿ ಓದಿ ತಂದೆಗೆ ಆಸರೆಯಾಗಬೇಕಿದ್ದ ಮಗ ಯಾರದೋ ನಿರ್ಲಕ್ಷ್ಯಕ್ಕೆ ಮಸಣ ಸೇರಿದ್ದಾನೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…