ಜನ ಮನದ ನಾಡಿ ಮಿಡಿತ

Advertisement

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ ಆಪರೇಷನ್ ಬ್ರಹ್ಮದಡಿ ಭಾರತ ಸಹಾಯಹಸ್ತ

ಭೂಕಂಪ ಪೀಡಿತ ಮ್ಯಾನ್ಮಾರ್‌ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.

“80 ಎನ್‌ಡಿಆರ್‌ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್‌ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.

ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್‌ಡಿಆರ್‌ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್​ಡಿಆರ್​ಎಫ್​ ಅನ್ನು ಭಾರತ ನಿಯೋಜಿಸಿತ್ತು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!