ಭೂಕಂಪ ಪೀಡಿತ ಮ್ಯಾನ್ಮಾರ್ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.
“80 ಎನ್ಡಿಆರ್ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್ಡಿಆರ್ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್ಡಿಆರ್ಎಫ್ ಅನ್ನು ಭಾರತ ನಿಯೋಜಿಸಿತ್ತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…