ಭೂಕಂಪ ಪೀಡಿತ ಮ್ಯಾನ್ಮಾರ್ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.
“80 ಎನ್ಡಿಆರ್ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್ಡಿಆರ್ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್ಡಿಆರ್ಎಫ್ ಅನ್ನು ಭಾರತ ನಿಯೋಜಿಸಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…