ಭೂಕಂಪ ಪೀಡಿತ ಮ್ಯಾನ್ಮಾರ್ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.
“80 ಎನ್ಡಿಆರ್ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್ಡಿಆರ್ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್ಡಿಆರ್ಎಫ್ ಅನ್ನು ಭಾರತ ನಿಯೋಜಿಸಿತ್ತು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…