ಭೂಕಂಪ ಪೀಡಿತ ಮ್ಯಾನ್ಮಾರ್ನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಭಾರತವು 80 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತುಕಡಿಯನ್ನು ನಿಯೋಜಿಸಲು ನಿರ್ಧರಿಸಿದೆ. ಹಾಗೇ, ಈಗಾಗಲೇ ನೆರೆಯ ದೇಶಕ್ಕೆ ಸಹಾಯ ಮಾಡಲು ‘ಆಪರೇಷನ್ ಬ್ರಹ್ಮ’ ಅಡಿಯಲ್ಲಿ ಭಾರತ ನೇಪಾಳಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಳುಹಿಸಿದೆ.
“80 ಎನ್ಡಿಆರ್ಎಫ್ ಸಿಬ್ಬಂದಿಯ ತಂಡವನ್ನು ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ. ತಂಡವು ಇಂದು ಸಂಜೆಯ ವೇಳೆಗೆ ಮ್ಯಾನ್ಮಾರ್ಗೆ ತಲುಪುವ ನಿರೀಕ್ಷೆಯಿದೆ” ಎಂದು ಮೂಲಗಳು ತಿಳಿಸಿವೆ. ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಅವರನ್ನು ಮುನ್ನಡೆಸಲಿದ್ದಾರೆ.
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ಶುಕ್ರವಾರ (ಮಾರ್ಚ್ 28) ಸಂಭವಿಸಿದ ತೀವ್ರ ಭೂಕಂಪದಿಂದ ನಲುಗಿಹೋಗಿದ್ದು, ಕಟ್ಟಡಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಮ್ಯಾನ್ಮಾರ್ನಲ್ಲಿ ಕನಿಷ್ಠ 1,002 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತವು ಹಿಂದಿನ ಎರಡು ಸಂದರ್ಭಗಳಲ್ಲಿ ವಿದೇಶಗಳಲ್ಲಿ ಎನ್ಡಿಆರ್ಎಫ್ ಅನ್ನು ನಿಯೋಜಿಸಿತ್ತು. 2015ರ ನೇಪಾಳದ ಭೂಕಂಪ ಮತ್ತು 2023ರ ಟರ್ಕಿಯೆ ಭೂಕಂಪದ ಸಮಯದಲ್ಲಿ ಎನ್ಡಿಆರ್ಎಫ್ ಅನ್ನು ಭಾರತ ನಿಯೋಜಿಸಿತ್ತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…