ಭದ್ರಾ ಅಭಯಾರಣ್ಯ ವ್ಯಾಪ್ತಿಯ ಹೆಜ್ಜೆಯ ವಲಯದಲ್ಲಿ ಸುಮಾರು 50 ವರ್ಷ ಪ್ರಾಯದ ಒಂಟಿ ದಂತ ಹೊಂದಿದ್ದ ಸಲಗ ಸಾವನ್ನಪ್ಪಿದೆ.
ಆನೆಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು ತೇಗೂರು ಗುಡ್ಡ ಬೇಟೆ ನಿಗ್ರಹ ಪಡೆಯ ಸಿಬ್ಬಂದಿ ಅರಣ್ಯ ಗಸ್ತು ತಿರುಗುವಾಗ ಆನೆಯ ಕಳೇಬರ ಪತ್ತೆಯಾಗಿದೆ. ಕಳೆದ ಎರಡು ವರ್ಷದಿಂದ ಆನೆಯ ಹಿಂಬದಿ ಎಡಗಾಲು ಡೊಂಕಾಗಿ ಕುಂಟುತ್ತ ಆರಣ್ಯದಲ್ಲಿ ಆಹಾರ ಅರಸುತ್ತಿತ್ತು ಎನ್ನಲಾಗಿದೆ. ಪ್ರಕಾಶ್ ನೇತೃತ್ವದ ಪಶು ವೈದ್ಯರ ತಂಡ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದೆ. ಅದರ ಹೊಟ್ಟೆಯಲ್ಲಿ ಯಾವುದೇ ಆಹಾರ ಕಂಡುಬಂದಿಲ್ಲ. ಹೀಗಾಗಿ ಆನೆ ಸಹಜವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ. ಸರ್ಕಾರದ ಆದೇಶದ ಅನ್ವಯ ಆನೆಯ ದಂತವನ್ನು ತೆಗೆದು ಆನೆಯ ಕಳೇಬರ ಅಲ್ಲಿಯೇ ಬಿಡಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…