ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ:  ಮುತ್ತೂಟ್ ಫೈನಾನ್ಸ್ ದರೋಡೆಗೆ ಪ್ರಯತ್ನ – ಇಬ್ಬರು ಆರೋಪಿಗಳ ಬಂಧನ

ದೇರಳಕಟ್ಟೆಯಲ್ಲಿರುವ ಮತ್ತೂಟ್ ಫೈನಾನ್ಸ್ ದರೋಡೆಗೆತ್ನಿಸುತ್ತಿದ್ದಾಗಲೇ ಸೈರನ್ ಮೊಳಗಿದ ಪರಿಣಾಮ ಇಬ್ಬರು ಕೇರಳ ಮೂಲದ ದರೋಡೆಕೋರರು ಲಾಕ್ ಆದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಕೇರಳ ರಾಜ್ಯದ ಕಾಂಞಂಗಾಡ್ ನಿವಾಸಿ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಕಟ್ಟಡದಲ್ಲಿ ಲಾಕ್ ಆಗಿ ಬಂಧಿತರಾದ ದರೋಡೆಕೋರರು.

ಶನಿವಾರ ತಡರಾತ್ರಿ ಸುಮಾರು 1.30 ಸುಮಾರಿಗೆ ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ಕಟ್ಟಡವೊಂದರ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್‌ಗೆ ಕೇರಳ ಮೂಲದ ಮೂವರು ದರೋಡೆಕೋರರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಮಳಿಗೆಯ ಬೀಗ ಒಡೆದು, ಸಿಸಿ ಕ್ಯಾಮರಾವನ್ನು ಒಡೆದು ಹಾಕಿದಾಗ ಸೈರನ್ ಮೊಳಗಿದೆ. ಇದು ಮುತ್ತೂಟ್ ಫೈನಾನ್ಸ್‌ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದಾರೆ. ಸ್ಥಳಕ್ಕೆ ಕೊಣಾಜೆ ಪೊಲೀಸರು ಧಾವಿಸಿದ್ದಾರೆ. ಈ ವೇಳೆ ಬೆದರಿದ ದರೋಡೆಕೋರರಲ್ಲಿ ಓರ್ವನು ಮೇಲಿನಿಂದ ಹಾರಿದಾಗ ಪೊಲೀಸರು ಹಾಗೂ ಸ್ಥಳೀಯರು ಹಿಡಿದಿದ್ದಾರೆ. ಮತ್ತೋರ್ವನು ಕಟ್ಟಡದಲ್ಲಿ ಅಡಗಿ ಕುಳಿತು ಸಿಕ್ಕಿಬಿದ್ದಿದ್ದಾನೆ. ಇನ್ನೋರ್ವನು ತಪ್ಪಿಸಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಗಳು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಜನವರಿ ತಿಂಗಳಲ್ಲಿ ಕೆ.ಸಿ.ರೋಡ್ ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ನಡೆಯಲಿದ್ದ ಸಂಭವನೀಯ ದರೋಡೆ ಪ್ರಕರಣವನ್ನು ಪೊಲೀಸರು ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!