ದೇರಳಕಟ್ಟೆಯಲ್ಲಿರುವ ಮತ್ತೂಟ್ ಫೈನಾನ್ಸ್ ದರೋಡೆಗೆತ್ನಿಸುತ್ತಿದ್ದಾಗಲೇ ಸೈರನ್ ಮೊಳಗಿದ ಪರಿಣಾಮ ಇಬ್ಬರು ಕೇರಳ ಮೂಲದ ದರೋಡೆಕೋರರು ಲಾಕ್ ಆದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಕೇರಳ ರಾಜ್ಯದ ಕಾಂಞಂಗಾಡ್ ನಿವಾಸಿ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಕಟ್ಟಡದಲ್ಲಿ ಲಾಕ್ ಆಗಿ ಬಂಧಿತರಾದ ದರೋಡೆಕೋರರು.
ಶನಿವಾರ ತಡರಾತ್ರಿ ಸುಮಾರು 1.30 ಸುಮಾರಿಗೆ ದೇರಳಕಟ್ಟೆ ಜಂಕ್ಷನ್ನಲ್ಲಿರುವ ಕಟ್ಟಡವೊಂದರ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ಗೆ ಕೇರಳ ಮೂಲದ ಮೂವರು ದರೋಡೆಕೋರರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಮಳಿಗೆಯ ಬೀಗ ಒಡೆದು, ಸಿಸಿ ಕ್ಯಾಮರಾವನ್ನು ಒಡೆದು ಹಾಕಿದಾಗ ಸೈರನ್ ಮೊಳಗಿದೆ. ಇದು ಮುತ್ತೂಟ್ ಫೈನಾನ್ಸ್ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದಾರೆ. ಸ್ಥಳಕ್ಕೆ ಕೊಣಾಜೆ ಪೊಲೀಸರು ಧಾವಿಸಿದ್ದಾರೆ. ಈ ವೇಳೆ ಬೆದರಿದ ದರೋಡೆಕೋರರಲ್ಲಿ ಓರ್ವನು ಮೇಲಿನಿಂದ ಹಾರಿದಾಗ ಪೊಲೀಸರು ಹಾಗೂ ಸ್ಥಳೀಯರು ಹಿಡಿದಿದ್ದಾರೆ. ಮತ್ತೋರ್ವನು ಕಟ್ಟಡದಲ್ಲಿ ಅಡಗಿ ಕುಳಿತು ಸಿಕ್ಕಿಬಿದ್ದಿದ್ದಾನೆ. ಇನ್ನೋರ್ವನು ತಪ್ಪಿಸಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಗಳು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಜನವರಿ ತಿಂಗಳಲ್ಲಿ ಕೆ.ಸಿ.ರೋಡ್ ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ನಲ್ಲಿ ನಡೆಯಲಿದ್ದ ಸಂಭವನೀಯ ದರೋಡೆ ಪ್ರಕರಣವನ್ನು ಪೊಲೀಸರು ತಪ್ಪಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…