ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನಗಳ ಮೇಲೆ ಮರಗಳು ಬಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದ ಕುಲ್ಲುವಿನ ಮಣಿಕರಣ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡಿದ್ದಾರೆ. ಮರಗಳ ಕಾಂಡಗಳು ವಾಹನಗಳ ಮೇಲೆ ಬಿದ್ದು ಜನರು ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಐದು ಜನರನ್ನು ಗಾಯಗಳೊಂದಿಗೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇಂದು ಸಂಜೆ ಈ ಅಪಘಾತ ಸಂಭವಿಸಿದೆ.



