ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರು ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ಹಾವಳಿಗೆ ಬಾಲಕ ಮೃತಾಪಟ್ಟಿದ್ದಾನೆ.
ಕಸಬಾಲಿಂಗಸುಗೂರು ಗ್ರಾಮದ ಸಿದ್ದು ಬೀರಪ್ಪ ಗುಡಿಹಾಳ(5) ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ. ತಾಯಿ ಶೌಚಾಲಯಕ್ಕೆ ತೆರಳಿದ್ದಾರೆಂದು ಭಾವಿಸಿ ಸಿದ್ದು ಅಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಶೌಚಾಲಯದ ಹತ್ತಿರ ಮರಿಗಳಿಗೆ ಜನ್ಮ ನೀಡಿದ್ದ ನಾಯಿಯೊಂದು ಮಗುವನ್ನು ನೋಡಿ ಬೊಗಳಲು ಶುರು ಮಾಡಿದೆ. ಈ ವೇಳೆ ಹತ್ತಿರದಲ್ಲಿದ್ದ ನಾಯಿಗಳೆಲ್ಲಾ ದಾಳಿ ಮಾಡಲು ಮುಂದಾಗಿದೆ.
ಮಗು ಕಿರುಚುವುದನ್ನು ಕೇಳಿದ ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…