ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ ಭೂ ಉಪಯೋಗ ಬದಲಾವಣೆಯ ಕಡತದಲ್ಲಿ ಸರ್ವೆ ನಕ್ಷೆ ಸೇರಿದಂತೆ ವಿವಿಧ ದಾಖಲೆಗಳನ್ನು ನಿಯಮ ಮೀರಿ ನಕಲಿಯಾಗಿ ಸೃಷ್ಟಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉಡುಪಿ ಶಾಸಕರು ಮನವಿ ಮಾಡಿದ್ದರು.
ಈ ವಿಚಾರಗಳ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಅದಕ್ಕೆ ತೃಪ್ತಿಕರವಾದ ಸಮಜಾಯಿಷಿ ಸಲ್ಲಿಕೆಯಾಗದೆ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿಂದೆ ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿರುವ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರನ್ನು ಸರಕಾರ ಮರು ನೇಮಕ ಮಾಡಿ ಆದೇಶ ಮಾಡಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…