ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ ಭೂ ಉಪಯೋಗ ಬದಲಾವಣೆಯ ಕಡತದಲ್ಲಿ ಸರ್ವೆ ನಕ್ಷೆ ಸೇರಿದಂತೆ ವಿವಿಧ ದಾಖಲೆಗಳನ್ನು ನಿಯಮ ಮೀರಿ ನಕಲಿಯಾಗಿ ಸೃಷ್ಟಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉಡುಪಿ ಶಾಸಕರು ಮನವಿ ಮಾಡಿದ್ದರು.
ಈ ವಿಚಾರಗಳ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಅದಕ್ಕೆ ತೃಪ್ತಿಕರವಾದ ಸಮಜಾಯಿಷಿ ಸಲ್ಲಿಕೆಯಾಗದೆ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿಂದೆ ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿರುವ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರನ್ನು ಸರಕಾರ ಮರು ನೇಮಕ ಮಾಡಿ ಆದೇಶ ಮಾಡಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…