ಭಾರತೀಯ ಜನತಾ ಪಾರ್ಟಿ ಕೊಳವೂರು 2 ನೇ ವಾರ್ಡಿನ ಬೂತ್ ಸಮಿತಿಯು ಎಡಪದವು ಮಹಾಶಕ್ತಿ ಕೇಂದ್ರದ ಕಚೇರಿಯಲ್ಲಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಜಗದೀಶ್ ದುರ್ಗಾಕೊಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಸರ್ವ ಕಾರ್ಯಕರ್ತರ ಸಮ್ಮುಖದಲ್ಲಿ ಕೊಳವೂರು 2 ನೇ ವಾರ್ಡಿನ ಸಮಿತಿ ರಚಿಸಲಾಯಿತು . ಸಮಿತಿಯ ವಾರ್ಡಿನ ಅಧ್ಯಕ್ಷರಾಗಿ ದೀಕ್ಷಿತ್ ಆಚಾರ್ಯ , ಪ್ರಧಾನ ಕಾರ್ಯದರ್ಶಿ ಅಶ್ವಥ್ , ಕಾರ್ಯದರ್ಶಿಯಾಗಿ ರವಿಚಂದ್ರ , ಮತಗಟ್ಟೆ ಏಜೆಂಟ್ ಜಯ ಬಡಕಾಯಿಬೆಟ್ಟು , BLA 2 ರಮೇಶ್ , OBC ಸದಸ್ಯ ಲೋಕೇಶ್ , SC ಮೋರ್ಚಾ ಸದಸ್ಯ ಪ್ರವೀಣ , ST ಮೋರ್ಚಾ ಸದಸ್ಯ ದಾಮೋದರ ನಾಯ್ಕ್ , ಮಹಿಳಾ ಮೋರ್ಚಾದ ಸದಸ್ಯರು ಸುಚಿತ್ರ ಹಾಗೂ ಶಶಿಕಲಾ ಇವರು ಆಯ್ಕೆಯಾದರು .
ಈ ವೇಳೆ ಮಾತನಾಡಿದ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ ಪಕ್ಷವನ್ನು ಬಲಪಡಿಸುವ ದೃಷ್ಟಿಯಿಂದ ನಾವೆಲ್ಲರೂ ಶ್ರಮಿಸಬೇಕಾಗಿದೆ , ಮುಂಬರುವ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಚುನಾವಣೆಯಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಆ ಮೂಲಕ ಪಕ್ಷಕ್ಕೆ ಶಕ್ತಿ ತುಂಬೋಣ ಎಂದರು . ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ಇವರು ಮಾತನಾಡಿ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕರಾದ ವೈ ಭರತ್ ಶೆಟ್ಟಿ ಹಾಗೂ ಕೊಳವೂರು ಭಾಗದ ಪಂಚಾಯತ್ ಸದಸ್ಯರ ನೆರವಿನಿಂದ ತುಂಬಾ ಅಭಿವೃದ್ಧಿ ಕಾರ್ಯಗಳು ನಡೆದಿದ್ದು ಅದನ್ನು ಸಾಮಾನ್ಯ ಜನರಿಗೆ ಮುಟ್ಟಿಸುವಂತ ಕೆಲಸವನ್ನು ಕಾರ್ಯಕರ್ತರಾದ ನಾವೆಲ್ಲರು ಮಾಡಬೇಕಾಗಿದೆ ಎಂದರು.
ಸದಸ್ಯರಾದ ಶಶಿಕಲಾ , ಕೊಳವೂರು ಶಕ್ತಿ ಕೇಂದ್ರದ ಪ್ರಮುಖರಾದ ಅಜಯ್ ಅಮೀನ್ , ಸದಾನಂದ ಶೆಟ್ಟಿ , ಉತ್ತರ ಮಂಡಲದ ಉಪಾಧ್ಯಕ್ಷರಾದ ಸಂತೋಷ್ ಕಂಗಿನಡಿ ಹಾಗೂ ಬಿಜೆಪಿ ಕಾರ್ಯಕರ್ತರಾದ ಹರ್ಷಿತ್ , ಲೋಕೇಶ್ , ದಿನೇಶ್ ರೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…