ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮಹತ್ವದ ಸಾಧನೆ : ಕೆರೋಸೀನ್ ಎಂಜಿನ್ ಅಭಿವೃದ್ಧಿಯಲ್ಲಿ ಯಶಸ್ವಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮಹತ್ವದ ಸಾಧನೆಯೊಂದನ್ನು ಮಾಡಿದೆ. ಉಡಾವಣಾ ವಾಹನವಾದ ಮಾರ್ಕ್-3 ರ ಬೂಸ್ಟರ್ ಹಂತಕ್ಕೆ ಶಕ್ತಿ ತುಂಬಲು ದ್ರವರೂಪದ ಆಮ್ಲಜನಕ ಅಥವಾ ಕೆರೋಸೀನ್ ಬಳಸುವ ಸೆಮಿ-ಕ್ರಯೋಜೆನಿಕ್ ಎಂಜಿನನ್ನು ಅಭಿವೃದ್ಧಿಪಡಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ.

ಇದರ ಪರೀಕ್ಷೆಯನ್ನು ಶುಕ್ರವಾರ ನಡೆಸಲಾಗಿದ್ದು, ಈ ವೇಳೆ 2.5 ಸೆಕೆಂಡುಗಳ ಕಾಲ ಸುಗಮ ದಹನ ಮತ್ತು ಬೂಸ್ಟ್‌ಸ್ಟ್ರಾಪ್ ಮೋಡ್ ಕಾರ್ಯಾಚರಣೆಯನ್ನು ಎಂಜಿನ್‌ ಪ್ರದರ್ಶಿಸಿರುವುದಾಗಿ ಇಸ್ರೋ ತಿಳಿಸಿದೆ.

ಈ ಮೂಲಕ ಪ್ರೀ-ಬರ್ನರ್‌, ಟರ್ಬೋ ಪಂಪ್‌, ಆರಂಭಿಕ ವ್ಯವಸ್ಥೆ ಮತ್ತು ನಿಯಂತ್ರಣ ಉಪಕರಣಗಳಂತಹ ನಿರ್ಣಾಯಕ ಉಪವ್ಯವಸ್ಥೆಯ ಸಮಗ್ರ ಕಾರ್ಯಕ್ಷಮತೆಯನ್ನು ಪರೀಕ್ಷಿಸಲಾಗಿದೆ. ಈ ಸಂಬಂಧ ಇನ್ನೂ ಅನೇಕ ಪರೀಕ್ಷೆಗಳು ನಡೆಯಲಿವೆ.

2 ಸಾವಿರ ಕಿಲೋನ್ಯೂಟನ್‌ನಷ್ಟು ಥ್ರಸ್ಟ್‌ ನೀಡುವ ಸೆಮಿ-ಕ್ರಯೋಜೆನಿಕ್ ಎಂಜಿನ್‌ ಅನ್ನು ಭವಿಷ್ಯದ ಉಡಾವಣಾ ವಾಹನಗಳ ಪೇಲೋಡ್‌ಗಳನ್ನು ಉತ್ತಮಗೊಳಿಸಲು ಮತ್ತು ಬೂಸ್ಟರ್ ಹಂತಗಳಿಗೆ ಶಕ್ತಿ ತುಂಬಲು ಬಳಸಲಾಗುತ್ತದೆ. ಇದರಿಂದ ಪೇಲೋಡ್‌ನ ಸಾಮರ್ಥ್ಯ 4 ಟನ್‌ನಿಂದ 5 ಟನ್‌ಗೆ ಹೆಚ್ಚಳವಾಗಲಿದೆ.

ಸೆಮಿ-ಕ್ರಯೋಜೆನಿಕ್ ಎಂಜಿನ್‌ ಅನ್ನು ಮೊದಲ ಬಾರಿ ಮಾ.28ರಂದು ಯಶಸ್ವಿಯಾಗಿ ಪರೀಕ್ಷಿಸಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!