ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಸಿಬ್ಬಂದಿ 17 ನಕ್ಸಲರನ್ನು ಹಾಗೂ ಬಿಜಾಪುರ ಜಿಲ್ಲೆಯಲ್ಲಿ ಒಬ್ಬನನ್ನು ಹತ್ಯೆ ಮಾಡಿದ್ದಾರೆ.
ಹತ ನಕ್ಸಲರಲ್ಲಿ 11 ಮಹಿಳೆಯರಿದ್ದು, 25 ಲಕ್ಷ ರು. ಬಹುಮಾನ ಹೊಂ ದಿದ್ದ ಓರ್ವ ನಕ್ಸಲನೂ ಇದ್ದಾನೆ. ಈ ಮೂಲಕ ರಾಜ್ಯದಲ್ಲಿ ಈ ವರ್ಷ ಎನ್ಕೌಂಟರ್ಗೆ ಬಲಿಯಾದ ನಕ್ಸಲರ ಸಂಖ್ಯೆ 134ಕ್ಕೇರಿಕೆಯಾಗಿದೆ.
ಕೆರ್ಲಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಂಡಿನ ಕಾಳಗ ನಡೆದಿದ್ದು, 17 ಮಾವೋವಾದಿಗಳು ಹತರಾಗಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ಒಬ್ಬ ನಕ್ಸಲನನ್ನು ಸಾಯಿಸಲಾಗಿದೆ. ಭದ್ರತಾ ಪಡೆಯ 4 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಳಿಕವೂ ಈ ಪ್ರದೇಶದಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ. ಈ ವೇಳೆ ನಕ್ಸಲರಿಂದ ಎಕೆ- 47 ರೈಫಲ್, ಎಸ್ಎಲ್ಆರ್, ಐಎನ್ಎಸ್ಎಎಸ್ ರೈಫೆಲ್, 303 ರೈಫೆಲ್, ಬಿಜಿಎಲ್ ಸೇರಿದಂತೆ ದೊಡ್ಡ ಪ್ರಮಾಣದ ಬಂದೂಕು ಮತ್ತು ಸ್ಫೋಟಕ ವಸ್ತುಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ‘ಎಕ್ಸ್’ ಖಾತೆಯಲ್ಲಿ ಪ್ರತಿಕ್ರಿಯಿಸಿ, ‘ನಕ್ಸಲಿಸಂ ವಿರುದ್ಧ ಮತ್ತೊಂದು ದಾಳಿ ಆಗಿದೆ. ನಮ್ಮ ಭದ್ರತಾ ಸಿಬ್ಬಂದಿ ಸುಕ್ಮಾದಲ್ಲಿ 17 ನಕ್ಸಲರನ್ನು ಹತ್ಯೆ ಮಾಡಿ, ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಶಸ್ತ್ರಾಸ್ತ್ರ ಮತ್ತು ಹಿಂಸಾಚಾರದಿಂದ ಬದಲಾವಣೆ ತರಲು ಸಾಧ್ಯವಿಲ್ಲ. ಕೇವಲ ಶಾಂತಿ ಮತ್ತು ಅಭಿವೃದ್ಧಿಯಿಂದ ಬದಲಾವಣೆ ಸಾಧ್ಯ’ ಎಂದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…