ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ ಹಾಗೂ ಗುರುಗಳ ಭೇಟಿ ಮತ್ತು ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವರ್ಷಂ ಪ್ರತಿಯಂತೆ ಶೃಂಗೇರಿ ಜಗದ್ಗುರುಗಳ ಚಾತುರ್ಮಾಸ ಸಂದರ್ಭದಲ್ಲಿ ಕರಾಡ ಸಮಾಜದ ವತಿಯಿಂದ ಸಮಾಜ ಬಾಂಧವರಿಗಾಗಿ ಶೃಂಗೇರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ಸಮಾಜ ಬಾಂಧವರಿಗಾಗಿ ಏರ್ಪಡಿಸಲಾಗಿದ್ದ ಶೃಂಗೇರಿ ಪ್ರವಾಸದಲ್ಲಿ ಮಂಗಳೂರು, ಮೂಡಬಿದರೆ,ಉಡುಪಿ,ಮಣಿಪಾಲ, ಹಾಗೂ ಇತರರಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭಾಗವಹಿಸಿದ್ದು, ದೇವರ ದರ್ಶನವನ್ನು ಪಡೆದು ಜಗದ್ಗುರು ಭಾರತಿ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಜಗದ್ಗುರು ವಿದುಶೇಖರ ಭಾರತಿ ಮಹಾಸ್ವಾಮಿಗಳಿಂದ ಮಂತ್ರಾಕ್ಷತೆ ಪಡೆದು ಭಕ್ತರು ಪುನೀತರಾದರು,
ಇದೇ ಸಂದರ್ಭದಲ್ಲಿ ಕರಾಡ ಸಮಾಜ ಸುಧಾರಕ ಸಂಘ ಗುಂಡ್ಯಕ್ಕದ ವತಿಯಿಂದ ಗುರುಗಳ ಪಾದ ಪೂಜೆ ಹಾಗೂ ಗುರು ಕಾಣಿಕೆ ಸಮರ್ಪಿಸಲಾಯಿತು ಅಂತೆಯೇ ಯಾತರಾರ್ಥಿಗಳಿಗೂ ಪಾದ ಪೂಜೆಗೆ ಅವಕಾಶ ನೀಡಲಾಗಿತ್ತು, ಗುರುಗಳಿಂದ ಫಲಮಂತರಾಕ್ಷತೆ ಹಾಗೂ ಶಾರದೆಯ ಪ್ರಸಾದ ರೂಪದ ಪುಸ್ತಕವನ್ನು ಭಕ್ತರಿಗೆ ನೀಡಿ ಸಮಾಜ ಬಾಂಧವರನ್ನ ಆಶೀರ್ವದಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…