ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ ಹಾಗೂ ಗುರುಗಳ ಭೇಟಿ ಮತ್ತು ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವರ್ಷಂ ಪ್ರತಿಯಂತೆ ಶೃಂಗೇರಿ ಜಗದ್ಗುರುಗಳ ಚಾತುರ್ಮಾಸ ಸಂದರ್ಭದಲ್ಲಿ ಕರಾಡ ಸಮಾಜದ ವತಿಯಿಂದ ಸಮಾಜ ಬಾಂಧವರಿಗಾಗಿ ಶೃಂಗೇರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ಸಮಾಜ ಬಾಂಧವರಿಗಾಗಿ ಏರ್ಪಡಿಸಲಾಗಿದ್ದ ಶೃಂಗೇರಿ ಪ್ರವಾಸದಲ್ಲಿ ಮಂಗಳೂರು, ಮೂಡಬಿದರೆ,ಉಡುಪಿ,ಮಣಿಪಾಲ, ಹಾಗೂ ಇತರರಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭಾಗವಹಿಸಿದ್ದು, ದೇವರ ದರ್ಶನವನ್ನು ಪಡೆದು ಜಗದ್ಗುರು ಭಾರತಿ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಜಗದ್ಗುರು ವಿದುಶೇಖರ ಭಾರತಿ ಮಹಾಸ್ವಾಮಿಗಳಿಂದ ಮಂತ್ರಾಕ್ಷತೆ ಪಡೆದು ಭಕ್ತರು ಪುನೀತರಾದರು,
ಇದೇ ಸಂದರ್ಭದಲ್ಲಿ ಕರಾಡ ಸಮಾಜ ಸುಧಾರಕ ಸಂಘ ಗುಂಡ್ಯಕ್ಕದ ವತಿಯಿಂದ ಗುರುಗಳ ಪಾದ ಪೂಜೆ ಹಾಗೂ ಗುರು ಕಾಣಿಕೆ ಸಮರ್ಪಿಸಲಾಯಿತು ಅಂತೆಯೇ ಯಾತರಾರ್ಥಿಗಳಿಗೂ ಪಾದ ಪೂಜೆಗೆ ಅವಕಾಶ ನೀಡಲಾಗಿತ್ತು, ಗುರುಗಳಿಂದ ಫಲಮಂತರಾಕ್ಷತೆ ಹಾಗೂ ಶಾರದೆಯ ಪ್ರಸಾದ ರೂಪದ ಪುಸ್ತಕವನ್ನು ಭಕ್ತರಿಗೆ ನೀಡಿ ಸಮಾಜ ಬಾಂಧವರನ್ನ ಆಶೀರ್ವದಿಸಿದರು.
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…