ಜನ ಮನದ ನಾಡಿ ಮಿಡಿತ

Advertisement

ಚೆನ್ನೈ:ಹಿಂದಿಗಿಂತ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಈ ಬಾರಿ 10 ಪಟ್ಟು ಉತ್ತಮ – ಎಬಿಡಿ

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್‌ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್‌ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.

ಚೆಪಾಕ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್‌ಕಾಸ್ಟ್‌ನಲ್ಲಿ ಎಬಿಡಿ ಅರ್‌ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್‌ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್‌ಗಳು, ಬ್ಯಾಟರ್‌ಗಳು ಅಥವಾ ಫೀಲ್ಡರ್‌ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್‌ಸಿಬಿ ಉತ್ತಮ ಆರಂಭ ಮಾಡಿದೆ.

ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್‌ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್‌ ಹೊಂದಿರುವ ಏಕೈಕ ತಂಡ. ಆರ್‌ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್‌ ಪಾಟಿದಾರ್‌ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್‌ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!