ಜನ ಮನದ ನಾಡಿ ಮಿಡಿತ

Advertisement

ಚೆನ್ನೈ:ಹಿಂದಿಗಿಂತ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಈ ಬಾರಿ 10 ಪಟ್ಟು ಉತ್ತಮ – ಎಬಿಡಿ

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್‌ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್‌ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.

ಚೆಪಾಕ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್‌ಕಾಸ್ಟ್‌ನಲ್ಲಿ ಎಬಿಡಿ ಅರ್‌ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್‌ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್‌ಗಳು, ಬ್ಯಾಟರ್‌ಗಳು ಅಥವಾ ಫೀಲ್ಡರ್‌ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್‌ಸಿಬಿ ಉತ್ತಮ ಆರಂಭ ಮಾಡಿದೆ.

ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್‌ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್‌ ಹೊಂದಿರುವ ಏಕೈಕ ತಂಡ. ಆರ್‌ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್‌ ಪಾಟಿದಾರ್‌ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್‌ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!