ಜನ ಮನದ ನಾಡಿ ಮಿಡಿತ

Advertisement

ಚೆನ್ನೈ:ಹಿಂದಿಗಿಂತ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಈ ಬಾರಿ 10 ಪಟ್ಟು ಉತ್ತಮ – ಎಬಿಡಿ

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್‌ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್‌ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.

ಚೆಪಾಕ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್‌ಕಾಸ್ಟ್‌ನಲ್ಲಿ ಎಬಿಡಿ ಅರ್‌ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್‌ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್‌ಗಳು, ಬ್ಯಾಟರ್‌ಗಳು ಅಥವಾ ಫೀಲ್ಡರ್‌ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್‌ಸಿಬಿ ಉತ್ತಮ ಆರಂಭ ಮಾಡಿದೆ.

ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್‌ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್‌ ಹೊಂದಿರುವ ಏಕೈಕ ತಂಡ. ಆರ್‌ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್‌ ಪಾಟಿದಾರ್‌ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್‌ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!