ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.
ಚೆಪಾಕ್ನಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್ಕಾಸ್ಟ್ನಲ್ಲಿ ಎಬಿಡಿ ಅರ್ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್ಗಳು, ಬ್ಯಾಟರ್ಗಳು ಅಥವಾ ಫೀಲ್ಡರ್ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್ಸಿಬಿ ಉತ್ತಮ ಆರಂಭ ಮಾಡಿದೆ.
ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್ ಹೊಂದಿರುವ ಏಕೈಕ ತಂಡ. ಆರ್ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್ ಪಾಟಿದಾರ್ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…