ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.
ಚೆಪಾಕ್ನಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್ಕಾಸ್ಟ್ನಲ್ಲಿ ಎಬಿಡಿ ಅರ್ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್ಗಳು, ಬ್ಯಾಟರ್ಗಳು ಅಥವಾ ಫೀಲ್ಡರ್ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್ಸಿಬಿ ಉತ್ತಮ ಆರಂಭ ಮಾಡಿದೆ.
ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್ ಹೊಂದಿರುವ ಏಕೈಕ ತಂಡ. ಆರ್ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್ ಪಾಟಿದಾರ್ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…