ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.
ಚೆಪಾಕ್ನಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್ಕಾಸ್ಟ್ನಲ್ಲಿ ಎಬಿಡಿ ಅರ್ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್ಗಳು, ಬ್ಯಾಟರ್ಗಳು ಅಥವಾ ಫೀಲ್ಡರ್ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್ಸಿಬಿ ಉತ್ತಮ ಆರಂಭ ಮಾಡಿದೆ.
ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್ ಹೊಂದಿರುವ ಏಕೈಕ ತಂಡ. ಆರ್ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್ ಪಾಟಿದಾರ್ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…