ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ. ಇದು ಆರ್ಸಿಬಿ ಮುಂದಿನ ಹಾದಿಯನ್ನು ಸುಲಭಗೊಳಿಸಿದೆ’ ಎಂದಿದ್ದಾರೆ.
ಚೆಪಾಕ್ನಲ್ಲಿ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಪಾಡ್ಕಾಸ್ಟ್ನಲ್ಲಿ ಎಬಿಡಿ ಅರ್ಸಿಬಿಯನ್ನು ಹೊಗಳಿದ್ದಾರೆ. ‘ ಕಳೆದ ವರ್ಷ ಹರಾಜಿನಲ್ಲಿ ಆರ್ಸಿಬಿಗೆ ಸಮತೋಲನದ ಅಗತ್ಯವಿದೆ ಎಂದು ನಾನು ಮಾತನಾಡಿದ್ದೆ. ಇದು ಬೌಲರ್ಗಳು, ಬ್ಯಾಟರ್ಗಳು ಅಥವಾ ಫೀಲ್ಡರ್ಗಳ ಬಗ್ಗೆ ಅಲ್ಲ. ಐಪಿಎಲ್ ತಂಡಗಳು ಮತ್ತು ಆಯ್ಕೆಗಳ ಬಗ್ಗೆ. ಆರ್ಸಿಬಿ ಉತ್ತಮ ಆರಂಭ ಮಾಡಿದೆ.
ಈ ಋತುವಿನಲ್ಲಿ ಎರಡು ಪಂದ್ಯಗಳನ್ನೂ ಎದುರಾಳಿಗಳ ತವರಿನಲ್ಲಿಯೇ ಸೋಲಿಸಿರುವುದು ಉತ್ತಮ ಆರಂಭ. ಇಲ್ಲಿಂದ ಪಾಯಿಂಟ್ ಟೇಬಲ್ ನೋಡಿದರೆ, ಆರ್ಸಿಬಿ ಅಗ್ರಸ್ಥಾನದಲ್ಲಿದೆ. ಎರಡು ಗೆಲುವುಗಳು ಮತ್ತು ಅದ್ಭುತ ರನ್ ರೇಟ್ ಹೊಂದಿರುವ ಏಕೈಕ ತಂಡ. ಆರ್ಸಿಬಿಗೆ ದಾರಿ ಸುಲಭವಾಗುತ್ತದೆ’ ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕನ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ ರಜತ್ ಪಾಟಿದಾರ್ ಕೂಡ ಉತ್ತಮವಾಗಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬುತ್ತಿರುವ ನಾಯಕ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…