ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಮೂಡಬಿದಿರೆ ಸಹಯೋಗದಲ್ಲಿ ರೈತ ಸಂಪರ್ಕ ಕೇಂದ್ರ ಮೂಡುಬಿದರೆ ಇಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ಯ 95 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರೈತರಿಗೆ ಕೃಷಿ ತಂತ್ರಜ್ಞಾನಗಳ ಮಾಹಿತಿ ಹಾಗೂ ಪ್ರಧಾನ ಮಂತ್ರಿ ಬೆಳೆ ಯೋಜನೆ ಕುರಿತು ತರಬೇತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರಿನ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಟಿ. ಜೆ. ರಮೇಶ ರವರು ಸ್ಥಳ ನಿರ್ದಿಷ್ಟ ತಂತ್ರಜ್ಞಾನ ಗಳ ಅಳವಡಿಕೆಗೆ ಹಾಗೂ ಕೃಷಿ ಸಂಭದಿತ ತಂತ್ರಜ್ಞಾನ ಬಳಕೆ, ಮೊಬೈಲ್ ಆಪ್ ಬಳಕೆ ಮಾಡುವಂತೆ ರೈತರಿಗೆ ತಿಳಿಸಿದರು. ಡಾ.ಕೇದಾರನಾಥ ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಭಾಗವಹಿಸಿ ಭತ್ತ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಕಂಡು ಬರುವ ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ವಿಜ್ಞಾನಿಗಳು ಹುಳಿ ಮಣ್ಣು ನಿರ್ವಹಣೆ ಮತ್ತು ಸಮರ್ಪಕ ರಸಗೊಬ್ಬರಗಳ ಸೂಕ್ತ ಮತ್ತು ಸಮರ್ಪಕ ಬಳಕೆ ಮಾಹಿತಿ ನೀಡಿದರು.ಡಾ.ಹರೀಶ್ ಶಣೈ ಬತ್ತದ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಮತ್ತು ಹೊಸ ಬತ್ತದ ತಳಿಗಳ ಕುರಿತು ಮಾಹಿತಿ ನೀಡಿದರು. ಕರಾವಳಿ ಭಾಗದಲ್ಲಿ ಹೊಸ ಭತ್ತದ ತಳಿಗಳಾದ ಸೈಯಾದ್ರಿ ಪಂಚಮುಖಿ, ಸೈಯಾದ್ರಿ ಬ್ರಹ್ಮ, ಕೆಂಪು ಮುಕ್ತಿ ತಳಿಗಳು ಕರಾವಳಿ ಭಾಗದಲ್ಲಿ ಬೆಳೆಸಬಹುದಾಗಿದೆ ಎಂದರು. ಶ್ರೀ. ವಿ.ಎಸ್.ಕುಲಕರ್ಣಿ ಕೃಷಿ ಅಧಿಕಾರಿಗಳು ಅಧ್ಯಕ್ಷತೆಯನ್ನು ವಹಿಸಿ ಪ್ರಧಾನ್ ಮಂತ್ರಿ ಬೆಳೆ ವಿಮಾ ಯೋಜನೆ ಕುರಿತು ಮಾಹಿತಿ ನೀಡಿದರು. ವಿಮಾ ಅಧಿಕಾರಿಗಳಾದ ಸೋಮನಾಥ್ತ ಮತ್ತು ಪವನ್ ವಿಮೆ ಬಗ್ಗೆ ಮಾಹಿತಿ ಒದಗಿಸಿದರು, ರೈತರು ಇದರ ಸದ್ಬಳಕೆ ಮಾಡಬಹುದಾಗಿದ್ದು ಆಗಸ್ಟ್ 16ರ ಒಳಗಾಗಿ ವಿಮೆ ನೋಂದಣಿಗೆ ಸೂಚಿಸಲಾಯಿತು ಸಂಪರ್ಕ ಕೇಂದ್ರದ ಸಿಬ್ಬಂದಿಗಳಾದ ಯಲ್ಲನ್ ಗೌಡ, ಅನಾ ಲೋಬೊ, ಸುಜಯ, ಹರಿಣಾಕ್ಷಿ, ಜಯಂತಿ,ಹಾಗೂ ಕೃಷಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕೃಷಿ ಅಧಿಕಾರಿ ಕುಲಕರ್ಣಿಯವರು ಸ್ವಾಗತ ಮತ್ತು ವಂದನಾರ್ಪಣೆಗೆದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…