ಪ್ರಯಾಗ್ ರಾಜ್ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸನೋಜ್ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೊನಾಲಿಸಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಾಗ ಸಾಮಾಜಿಕ ಮಾಧ್ಯಮಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗುವುದರೊಳಗೆ ಪ್ರಖ್ಯಾತಿ ಗಳಿಸಿದ್ದರು.ಅವರ ವಿಶಿಷ್ಟ ಕಣ್ಣುಗಳು ಅವರಿಗೆ ವಿಶಿಷ್ಟ ಸೌಂದರ್ಯವನ್ನು ತಂದಿದ್ದವು.
ಮೊನಾಲೀಸಾ ಅವರನ್ನು ನಾಯಕಿಯಾಗಿಸಿ ಚಲನಚಿತ್ರ ಮಾಡುವ ಬಯಕೆಯನ್ನು ಸನೋಜ್ ವ್ಯಕ್ತಪಡಿಸಿದ್ದರು.ಈಗ ಸನೋಜ್ ಬಂಧನವಾಗುವುದರೊಂದಿಗೆ ಮೊನಾಲಿಸಾ ಚಿತ್ರರಂಗ ಪ್ರವೇಶದ ಮೇಲೆ ಕರಿನೆರಳು ಬಿದ್ದಂತಾಗಿದೆ. ಝಾನ್ಸಿ ಮೂಲದ ಯುವತಿ ನೀಡಿದ ದೂರಿನನ್ವಯ ಸನೋಜ್ ಮಿಶ್ರಾ ಬಂಧಿತರಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…