ಭಾರೀ ವಿರೋಧದ ನಡುವೆಯೂ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ನಲ್ಲಿ ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಲೋಕಸಭೆ ಬಳಿಕ, ರಾಜ್ಯಸಭೆಯಲ್ಲೂ ಮಹತ್ವದ ಮಸೂದೆ ಅಂಗೀಕಾರಗೊಂಡಿದೆ.
ಲೋಕಸಭೆಯಲ್ಲಿ ಏಪ್ರಿಲ್ 2ರಂದು ಅಂಗೀಕೃತಗೊಂಡಿತ್ತು. ಏಪ್ರಿಲ್ 3 ರಂದು ಮಧ್ಯರಾತ್ರಿಯವರೆಗೆ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ದಿನವಿಡೀ ನಡೆದ ಚರ್ಚೆಯ ನಂತರ ಕೇಂದ್ರ ಸಚಿವ ಕಿರಣ್ ರಿಜುಜು ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿದರು. ಬಳಿಕ 1.30ರ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು. ಬಳಿಕ 2.30 ಹೊತ್ತಿಗೆ ಮತದಾನದ ಫಲಿತಾಂಶವನ್ನು ರಾಜ್ಯಸಭೆಯ ಸಭಾಪತಿಗಳಾದ ಧನ್ಕರ್ ಅವರು ಪ್ರಕಟಿಸಿ, ಮಸೂದೆಯು ಪಾಸ್ ಆಗಿರುವುದಾಗಿ ಘೋಷಿಸಿದರು. ಡಿವಿಷನ್ ಆಧಾರದಲ್ಲಿ ನಡೆದ ಮತದಾನದಲ್ಲಿ ಮಸೂದೆಯ ಪರವಾಗಿ 128 ಮತಗಳು ಬಂದರೆ, ವಿರುದ್ಧವಾಗಿ 95 ಮತಗಳು ಬಂದವು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…