ಭಾರೀ ವಿರೋಧದ ನಡುವೆಯೂ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ನಲ್ಲಿ ಅಂಗೀಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಲೋಕಸಭೆ ಬಳಿಕ, ರಾಜ್ಯಸಭೆಯಲ್ಲೂ ಮಹತ್ವದ ಮಸೂದೆ ಅಂಗೀಕಾರಗೊಂಡಿದೆ.
ಲೋಕಸಭೆಯಲ್ಲಿ ಏಪ್ರಿಲ್ 2ರಂದು ಅಂಗೀಕೃತಗೊಂಡಿತ್ತು. ಏಪ್ರಿಲ್ 3 ರಂದು ಮಧ್ಯರಾತ್ರಿಯವರೆಗೆ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ದಿನವಿಡೀ ನಡೆದ ಚರ್ಚೆಯ ನಂತರ ಕೇಂದ್ರ ಸಚಿವ ಕಿರಣ್ ರಿಜುಜು ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿದರು. ಬಳಿಕ 1.30ರ ಸುಮಾರಿಗೆ ಮತದಾನಕ್ಕೆ ಹಾಕಲಾಯಿತು. ಬಳಿಕ 2.30 ಹೊತ್ತಿಗೆ ಮತದಾನದ ಫಲಿತಾಂಶವನ್ನು ರಾಜ್ಯಸಭೆಯ ಸಭಾಪತಿಗಳಾದ ಧನ್ಕರ್ ಅವರು ಪ್ರಕಟಿಸಿ, ಮಸೂದೆಯು ಪಾಸ್ ಆಗಿರುವುದಾಗಿ ಘೋಷಿಸಿದರು. ಡಿವಿಷನ್ ಆಧಾರದಲ್ಲಿ ನಡೆದ ಮತದಾನದಲ್ಲಿ ಮಸೂದೆಯ ಪರವಾಗಿ 128 ಮತಗಳು ಬಂದರೆ, ವಿರುದ್ಧವಾಗಿ 95 ಮತಗಳು ಬಂದವು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…